ಮರದ ಮೇಲಿಂದ ಬಿದ್ದು ಯುವಕ ಸಾವು

133

ಪ್ರಜಾಸ್ತ್ರ ಸುದ್ದಿ

ದೊಡ್ಡಬಳ್ಳಾಪುರ: ಮರದ ಮೇಲಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ. ಕರೇನಹಳ್ಳಿ ನಿವಾಸಿ ನಾಗೇಂದ್ರ ಪ್ರಸಾದ ಸಾವನ್ನಪ್ಪಿದ ಯುವಕನಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ಹೋದವನು ಮರದಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಮೃತ ನಾಗೇಂದ್ರ, ಮನೆಯಲ್ಲಿದ್ದ ಹಣವನ್ನು ಖರ್ಚು ಮಾಡುತ್ತಿದ್ದನಂತೆ. ಮನೆಯವರು ಎಷ್ಟೇ ಬುದ್ದಿವಾದ ಹೇಳಿದರೂ ಕೇಳುತ್ತಿರಲಿಲ್ಲವಂತೆ. ಇದೆ ವಿಚಾರಕ್ಕೆ ಮನೆಯಲ್ಲಿ ಒಂದಿಷ್ಟು ಮಾತಾಗಿದೆ. ಇದರಿಂದಾಗಿ ತಾಲೂಕು ಕಚೇರಿ ಹತ್ತಿರದ ಮರಕ್ಕೆ ನೇಣು ಹಾಕಿಕೊಳ್ಳಲು ಪಂಚೆಯನ್ನು ಕಟ್ಟುತ್ತಿದ್ದಾಗ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ.




Leave a Reply

Your email address will not be published. Required fields are marked *

error: Content is protected !!