ಯುವನಿಧಿ ಯೋಜನೆ ಚಾಲನೆಗೆ ಕ್ಷಣಗಣನೆ

108

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವದ 5 ಗ್ಯಾರೆಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನೆಗೆ ನಗರದ ಫ್ರೀಡಂ ಪಾರ್ಕ್ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ 1 ಲಕ್ಷ ಜನರು ಭಾಗವಹಿಸಲು ಪ್ಲಾನ್ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುದ್ಯೋಗಿ ಯುಕವರ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ.

ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ಪ್ರತಿ ತಿಂಗಳು ಸಿಗಲಿದೆ. ಇದು 2 ವರ್ಷದ ಯೋಜನೆಯಾಗಿದ್ದು, ಅಷ್ಟರಲ್ಲಿ ಉದ್ಯೋಗ ಹುಡುಕಿಕೊಳ್ಳಬೇಕು. ಹೀಗಾಗಿ ನಿರುದ್ಯೋಗಿಗಳಿಗೆ ಸಹಾಯ ಧನ ನೀಡುವುದಾಗಿದೆ.




Leave a Reply

Your email address will not be published. Required fields are marked *

error: Content is protected !!