ಅತಿಥಿಗಳಿಗಾಗಿ ಮನೆ ಮಕ್ಕಳನ್ನು ಹೊರ ಹಾಕುತ್ತಿರುವ ಕೆಯುಡಿ!

346

ಪ್ರಜಾಸ್ತ್ರ ಸುದ್ದಿ

ಧಾರವಾಡ: ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವ ನಿಮಿತ್ತ ಜನವರಿ 12 ರಿಂದ 16ರವರೆಗೆ ಯುವಜನೋತ್ಸವ ಆಚರಿಸಲಾಗುತ್ತಿದೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಬೇರೆ ಬೇರೆ ಕ್ಷೇತ್ರದವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಬೇರೆ ಬೇರೆ ರಾಜ್ಯದ ಯುವ ಜನತೆ ಬರುತ್ತಿದ್ದಾರೆ. ಆದರೆ ಅತಿಥಿಗಳ ವಾಸ್ತವ್ಯಕ್ಕೆ ಹಾಸ್ಟೆಲ್ ಖಾಲಿ ಮಾಡುವಂತೆ ವಿದ್ಯಾರ್ಥಿಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ ಹೊರಡಿಸಿರುವ ಸೂಚನೆಗೆ ವಿರೋಧ ವ್ಯಕ್ತವಾಗಿದೆ.

9 ದಿನಗಳ ಕಾಲ ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡಬೇಕೆಂದು ಸೂಚನೆ ಹೊರಡಿಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಕೊಠಡಿಗಳನ್ನು ಬಳಸಬಹುದಿತ್ತು. ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಬಹುದು ಅಥವ ಬದಲಿ ಏನಾದರೂ ವ್ಯವಸ್ಥೆ ಮಾಡಬಹುದಿತ್ತು. ಅದನ್ನು ಬಿಟ್ಟು ವಸತಿ ನಿಲಯ ಖಾಲಿ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗಿದೆ.

ನಿಗದಿತ ಸಮಯಕ್ಕೆ ತರಗತಿಗಳು ಮುಗಿದಿಲ್ಲ. ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳದೆ ಇರೋದರಿಂದ ಈಗಾಗಲೇ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ಪ್ರಾಧ್ಯಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ರಜೆ ಘೋಷಣೆಯಿಂದ ಮತ್ತಷ್ಟು ಸಮಸ್ಯೆಯಾಗುತ್ತೆ. ಮನೆಗೆ ಹೋಗುವ ಬದಲು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಅನ್ನೋದು ವಿದ್ಯಾರ್ಥಿಗಳ ಮಾತಾಗಿದೆ. ಅತಿಥಿಗಳು ಬರುತ್ತಾರೆ ಎಂದು ಮನೆ ಮಕ್ಕಳನ್ನು ಹೊರಗೆ ತಳ್ಳುವುದು ಎಷ್ಟು ಸರಿ ಅನ್ನೋ ಪ್ರಶ್ನೆ ಮೂಡಿದೆ.




Leave a Reply

Your email address will not be published. Required fields are marked *

error: Content is protected !!