ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ರಾಜ್ಯ ಸರ್ಕಾರದ 5 ಗ್ಯಾರೆಂಟಿಯಾದ ಯುವನಿಧಿ ಯೋಜನೆಯನ್ನು ಇಲ್ಲಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಲ್ಲಿನ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಹೆಸರು ಇಡಲಾಗುವುದು ಎಂದು ಘೋಷಿಸಿದರು.
ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಪ್ರೀಡಂ ಪಾರ್ಕ್ ಗೆ ನಾಮಕರಣ ಮಾಡಲಾಗುವುದು ಅಂತಾ ಘೋಷಿಸಿದರು.
ಇನ್ನು ಬಡವರಿಗೆ, ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ ಶಕ್ತಿ ತುಂಬಲು ಐದು ಗ್ಯಾರೆಂಟಿಗಳನ್ನು ಜಾರಿಗೆ ತಂದಿದ್ದೇವೆ. ಚುನಾವಣೆ ಪೂರ್ವದಲ್ಲಿ ನಮ್ಮ ಪ್ರಣಾಳಿಕೆಯನ್ನು ನೀಡಿದ್ದ ಐದು ಭರವಸೆಗಳನ್ನು ಈಡೇರಿಸಿದ್ದೇವೆ. ಗ್ಯಾರೆಂಟಿಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂಪಾಯಿ ಸೇರುತ್ತಿದ್ದು, ವರ್ಷಕ್ಕೆ 48-50 ಸಾವಿರ ರೂಪಾಯಿ ನೀಡಲಾಗುತ್ತಿದೆ ಎಂದರು.