ಬಳ್ಳಾರಿ: ಮಾಜಿ ಸಚಿವ, ಶಾಸಕ ಜಮೀರ ಅಹ್ಮದ ಇಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಮನೆ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಅವರು ಜಿಲ್ಲಾ ಪೊಲೀಸ್ ಕಚೇರಿಗೆ ಮಾಹಿತಿ ನೀಡಿದ್ದಾರೆ.
ಅಲ್ಪಸಂಖ್ಯಾತರ ವಿರುದ್ಧ ಶಾಸಕ ಸೋಮಶೇಖರ ರೆಡ್ಡಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಖಂಡಿಸಿ ಶಾಸಕ ಜಮೀರ ಅಹ್ಮದ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದಕ್ಕೆ ಪೊಲೀಸ್ರು ಅನುಮತಿ ನೀಡಿಲ್ಲ. ಆದ್ರೂ ಅವರು ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಈಗಾಗ್ಲೇ ಜಮೀರ ಅಹ್ಮದ ಬಳ್ಳಾರಿಗೆ ಆಗಮಿಸಿದ್ದಾರೆ.
ಜಮೀರ ಪ್ರತಿಭಟನೆ ಮಾಡುವುದಾದ್ರೆ ಮಾಡ್ಲಿ. ನನ್ನದೇನು ಅಭ್ಯಂತರವಿಲ್ಲವೆಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ರೆಡ್ಡಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿ ನೀಡಲಾಗಿದೆ.