ಶೂನ್ಯ ಬಡ್ಡಿದರದಲ್ಲಿ ಸಾಲ: ನಾಳೆ ‘ಆರ್ಥಿಕ ಸ್ಪಂದನ’ ಕಾರ್ಯಕ್ರಮಕ್ಕೆ ಚಾಲನೆ

415

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಲಾಕ್ ಡೌನ್ ನಿಂದಾಗಿ ಪ್ರತಿಯೊಂದು ವಲಯವೂ ಸಂಕಷ್ಟಕ್ಕೆ ತುತ್ತಾಗಿದೆ. ಹೀಗಾಗಿ ಸರ್ಕಾರ ಅವರ ನೆರವಿಗೆ ನಿಲ್ಲುತ್ತಿದೆ. ಇದೀಗ ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಸೆಪ್ಟೆಂಬರ್ 16ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ‘ಆರ್ಥಿಕ ಸ್ಪಂದನ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಸಚಿವ ಎಸ್.ಟಿ ಸೋಮಶೇಖರ, ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.

ಶೂನ್ಯ ಬಡ್ಡಿದರದಲ್ಲಿ 24.5 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಬೆಳೆ ಸಾಲ ವಿತರಣೆಯ ಗುರಿಯನ್ನ ಹೊಂದಲಾಗಿದೆ. ಅಲ್ದೇ, ಕೃಷಿಯೇತರ ವಲಯಕ್ಕೆ 24 ಸಾವಿರ ಕೋಟಿ ಸೇರಿದಂತೆ ಒಟ್ಟು 39,300 ಕೋಟಿ ಸಾಲ ನೀಡುವ ಮೂಲಕ, ಕರೋನಾ ಲಾಕ್ ಡೌನ್ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆಯಂತೆ.




Leave a Reply

Your email address will not be published. Required fields are marked *

error: Content is protected !!