ಜಿಪಂ ವಿಪಕ್ಷ ನಾಯಕನ ಮೇಲೆ ಮಾರಣಾಂತಿಕ ಹಲ್ಲೆ

412

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಜಿಲ್ಲಾ ಪಂಚಾಯ್ತಿ ವಿಪಕ್ಷ ನಾಯಕ ಮರಿಲಿಂಗಪ್ಪ ಕರ್ನಾಳ ಎಂಬುವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಹತ್ತಿರದಲ್ಲಿ ಈ ಘಟನೆ ನಡೆದಿದೆ.

ನಗರದ ಚಿತ್ತಾಪುರ ರಸ್ತೆಯಲ್ಲಿರುವ ಎಸ್ಪಿ ಕಚೇರಿ ಹಾಗೂ ಡಿಸಿ ಕಚೇರಿ ಹತ್ತರದಲ್ಲಿಯೇ, ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮರಿಲಿಂಗಪ್ಪನ ಮೇಲೆ ಮಚ್ಚು, ತಲವಾರನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನ ಹಳೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕಳುಹಿಸಲಾಗಿದೆ.

ಘಟನೆ ಎಸ್ಪಿ ಸೋನವಣೆ ಮಾತ್ನಾಡಿದ್ದು, ಬುಧವಾರ ಬೆಳಗ್ಗೆ 9.20ರ ಸುಮಾರಿಗೆ ಘಟನೆ ನಡೆದಿದೆ. ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ಹೋಗಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನ ಸಂಗ್ರಹಿಸಲಾಗ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನ ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!