ಪ್ರಜಾಸ್ತ್ರ ಸುದ್ದಿ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ, ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನ ಸಿಬಿಐ ವಶಕ್ಕೆ ಪಡೆದಿದೆ. ವಿನಯ ಕುಲಕರ್ಣಿ ಹಾಗೂ ವಿಜಯ ಕುಲಕರ್ಣಿಯನ್ನ ಸಿಸಿಬಿ ವಶಕ್ಕೆ ಪಡೆದಿದೆ.
ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು ಕುಲಕರ್ಣಿ ಸಹೋದರರನ್ನ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದೆ. ಧಾರವಾಡ ಜನತೆಯನ್ನ ಬೆಚ್ಚಿ ಬೀಳಿಸಿದ್ದ ಮರ್ಡರ್ ಕೇಸ್ ಗೆ ಇದೀಗ ಮತ್ತಷ್ಟು ರೋಚಕತೆ ಬಂದಿದೆ.