10 ದಿನದಲ್ಲಿ ಜಿಲ್ಲಾ, ತಾಲೂಕು ಪಂಚಾಯ್ತಿ ಕ್ಷೇತ್ರ ಪುನರ್ ವಿಂಗಡಣೆ

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇನ್ನು ಬಾಕಿ ಉಳಿದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳ ಪುನರ್ ವಿಂಗಡಣೆ ಸಂಬಂಧ 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಹೈಕೋರ್ಟ್ ಗೆ ಇಂದು ಮಾಹಿತಿ ನೀಡಿದೆ.

ಕ್ಷೇತ್ರ ವಿಂಗಡಣೆ ಸಂಬಂಧ ಸಲ್ಲಿಕೆಯಾಗಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ ನಾವದಗಿ, 10 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತೆ. ಸಮಿತಿ ನೀಡಿರುವ ವರದಿ ಆಧರಿಸಿ ಕ್ಷೇತ್ರ ವಿಂಗಡಣೆ ಮಾಡಲಾಗುತ್ತೆ ಎಂದರು.




Leave a Reply

Your email address will not be published. Required fields are marked *

error: Content is protected !!