ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡದ ನಟಿ ಕ್ರಿಷಿ ತಾಪಂಡ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್.ಆರ್ ನಗರದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಸ್ಥಳಕ್ಕೆ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ನಟಿ ಕ್ರಿಷಿ ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿ ಜೊತೆಗೆ ಸಂಬಂಧದ ಕುರಿತಾಗಿ ಭಾರೀ ಚರ್ಚೆಯಲ್ಲಿದ್ದರು. ಕ್ರಿಷಿ ನನಗೆ ಮೋಸ ಮಾಡಿದ್ದಾಳೆ ಎಂದು ಅರವಿಂದ್ ರೆಡ್ಡಿ ಆರೋಪಿಸಿದ್ದರು. ಐಷಾರಾಮಿ ಕಾರು, ಹಣ, ಅಪಾರ್ಟ್ ಮೆಂಟ್ ಸೇರಿದಂತೆ ಸಾಕಷ್ಟು ಖರ್ಚು ಮಾಡಿದ್ದಾನೆ ಎಂದು ನಟಿ ವಿರುದ್ಧ ದೂರಿದ್ದರು. ಇವರಿಗೆ ವೈಶಾಕ್ ಬೆದರಿಕೆ ಹಾಕಿದ ಆರೋಪದಡಿ ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈಗ ನೋಡಿದರೆ ಆತ್ಮಹತ್ಯೆಗೆ ಶರಣನಾಗಿದ್ದಾನೆ.



