ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಏರ್ ಇಂಡಿಯಾದ ಎಐ2651 ವಿಮಾನವು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗಕ್ಕೆ ರನ್ ವೇದಲ್ಲಿ ಅಪ್ಪಳಿಸಿದೆ. ಅದೃಷ್ಟವಶಾತ್ ದೊಡ್ಡ ದುರಂತವೊಂತ ತಪ್ಪಿದೆ. ವಿಮಾನದಲ್ಲಿ 181 ಪ್ರಯಾಣಿಕರಿದ್ದರು.
ಸ್ವಲ್ಪದರಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ವಿಮಾನದಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.



