LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರ ಸ್ವಾಮೀಜಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ದೇಶದಲ್ಲಿ ವಕ್ಫ್ ಬೋರ್ಡ್ ಇರಬಾರದು. ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ.

ನಿನ್ನೆಯ ದಿನ ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ಅದಕ್ಕಾಗಿ ಹೃತಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಮುಸಲ್ಮಾನರೂ ಈ ದೇಶದ ಪ್ರಜೆಗಳೆ. ಎಲ್ಲರಿಗೂ ಮತದಾನದ ಹಕ್ಕಿದೆ. ಮೂಲತಃ ಒಕ್ಕಲಿಗರು ದಧರ್ಮ ಸಹಿಷ್ಣುಗಳು. ನಮ್ಮ ಶ್ರೀಮಠಕ್ಕೆ ಮುಸ್ಲಿಮರು ಸಹ ಬಂದು ಹೋಗುತ್ತಾರೆ. ನಾವು ಸಹ ಮುಸ್ಲಿಮರ ಸಭೆ, ಸಮಾರಂಭ, ಮದುವೆಗಳಲ್ಲಿ ಭಾಗಿಯಾಗುತ್ತೇವೆ. ಈ ಜನಾಂಗದ ಬಗ್ಗೆ ಅಸಹಿಷ್ಣುತೆ ಹೊಂದಿಲ್ಲ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಭಾರತೀಕ ಕಿಸಾನ್ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ದೇಶದಲ್ಲಿ ವಕ್ಫ್ ಬೋರ್ಡ್ ಇರಲೇಬಾರದು. ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST