LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಜನರ ಉತ್ಸವ ಆಗಬೇಕು: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Benagloru): ಮೈಸೂರು(Dasara) ದಸರಾ-2024ಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕರೋನಾ(Corona) ಹಾಗೂ ಬರಗಾಲ(Drought) ಕಾರಣಕ್ಕೆ ಕಳೆದ ಬಾರಿ ಅದ್ಧೂರಿ ದಸರಾ ನಡೆಸಲು ಆಗಿಲ್ಲ. ಈ ಬಾರಿ ವಿಜೃಂಭಣೆಯ ದಸರಾ ಆಚರಿಸೋಣ. ಐತಿಹಾಸಿಕ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನಾವು ನೀಡುತ್ತೇವೆ. ಇದು ಜನರ ಉತ್ಸವ ಆಗಬೇಕು ಎಂದರು.

ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ, ಆಕರ್ಷಕ ಹಾಗೂ ಅರ್ಥಪೂರ್ಣ ಟ್ಯಾಬ್ಲೋಗಳು, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ದೀಪಾಂಲಕಾರ ಸೇರಿದಂತೆ ಪ್ರತಿಯೊಂದು ಅರ್ಥಪೂರ್ಣವಾಗಿರಬೇಕು. ದೀಪಾಂಲಕಾರ 21 ದಿನ ಇರಲಿ. ಗ್ಯಾರೆಂಟಿ ಯೋಜನೆ ಹಾಗೂ ಸರ್ಕಾರದ ಸಾರ್ಥಕ ಕೆಲಸಗಳ ಬಗ್ಗೆ ಪ್ರದರ್ಶನ ಮತ್ತು ತಿಳವಳಿಕೆ ಮೂಡಿಸಬೇಕು. ಕರ್ನಾಟಕ ಸಂಭ್ರಮ-20 ನವೆಂಬರ್ ತನಕ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸಬೇಕು ಎಂದು ಅಧಿಕಾರಿಗಳಿಗೆ, ಸಂಬಂಧಪಟ್ಟ ಸಚಿವರಿಗೆ ತಿಳಿಸಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar), ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST