LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಮೂರು ಕಡೆ ಬೆಂಕಿ ಅನಾಹುತ, 9 ಜನರ ಸಾವು

ಪ್ರಜಾಸ್ತ್ರ ಸುದ್ದಿ

ಮುಂಬೈ, ನವದೆಹಲಿ, ತಾರಾಪೀಠ: ದೇಶದ ಮೂರು ಕಡೆ ಸೋಮವಾರ ಮುಂಜಾನೆ ಬೆಂಕಿ ಅನಾಹುತ ಸಂಭವಿಸಿದೆ. ಇದರಿಂದಾಗಿ 9 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಮುಂಬೈನ ಕಾಂದಿವಲಿಯಲ್ಲಿನ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ಅವಗಡ ನಡೆದಿದೆ. ಈ ವೇಳೆ 9 ಜನರನ್ನು ರಕ್ಷಿಸಲಾಗಿದೆ.

ನವದೆಹಲಿಯ ಪಶ್ಚಿಮ ದೆಹಲಿಯ ರಘುಬೀರ ನಗರದಲ್ಲಿನ ಗೋದಾಮಿನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಇಬ್ಬರು ಮೃತಪಟ್ಟಿದ್ದಾರೆ. ಇ-ಆಟೋದ ಬ್ಯಾಟರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಇನ್ನು ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ತಾರಾಪೀಠದಲ್ಲಿ ನಾಲ್ಕು ಅಂತಸ್ತಿನ ಹೋಟೆಲ್ ನಲ್ಲಿ ಬೆಂಕಿ ದುರಂತ ನಡೆದಿದೆ. ಇಲ್ಲಿ ಬರೋಬ್ಬರಿ 7 ಜನರು ಮೃತಪಟ್ಟಿದ್ದಾರೆ. ಬೆಳಗಿನ ಜಾವ 5 ಗಂಟೆಗೆ ಬೆಂಕಿ ಅನಾಹುತ ಸಂಭವಿಸಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST