ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇದೆ ಆಗಸ್ಟ್ 29, 30ರಂದು ಕನ್ನಡ ಚಿತ್ರರಂಗದ ಹಾಸ್ಯನಟ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪಾವನಾಗೌಡ ಎಂಬುವರೊಂದಿಗೆ ಮದುವೆಯಾಗುತ್ತಿದ್ದು, ಕೆಲವೊಂದು ವಿಚಾರಗಳನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿದ್ದಾರೆ. ಅದರಲ್ಲಿ ಬಹುಮುಖ್ಯವಾಗಿ ನಟ ದರ್ಶನ್ ಅವರನ್ನು ಮದುವೆಗೆ ಆಹ್ವಾನದ ವಿಚಾರವಾಗಿ ಮಾತನಾಡಿದ್ದಾರೆ.
ದರ್ಶನ್ ಅವರ ಪ್ರಕರಣದಲ್ಲಿ ನಾನು ಸಾಕ್ಷಿಯಾಗಿದ್ದೇನೆ. ಹೀಗಾಗಿ ಅವರು ಜೈಲಿನಲ್ಲಿ ಇಲ್ಲದಿದ್ದರು ಅವರನ್ನು ನಾನು ಕರೆಯುವಂತಿಲ್ಲ. ಅವರು ಸಹ ಬರುತ್ತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಮದುವೆಗೆ ಕರೆದಿಲ್ಲ. ಈ ಪ್ರಕರಣದಲ್ಲಿ ನಾನು ಸಾಕ್ಷಿ ಆಗಿರುವುದರಿಂದ ಇಷ್ಟೇ ಹೇಳಲು ಸಾಧ್ಯ ಎಂದಿದ್ದಾರೆ. ಯಶ್ ಅವರನ್ನು ನಾನು ಅಣ್ಣ ಎಂದು ಕರೆಯುತ್ತೇನೆ. ಮದುವೆ ಆದ ಬಳಿಕ ಮೊದಲ ನೋಡುವ ಸಿನಿಮಾ ಟಾಕ್ಸಿಕ್ ಅಂತಾ ಹೇಳಿದ್ದಾರೆ.



