ಪ್ರಜಾಸ್ತ್ರ ಸುದ್ದಿ
ನವದೆಹಲಿ(Vijayapura): ಪ್ರಶ್ನೆಪತ್ರಿಕೆ ಸೋರಿಕೆ, ಭಾರಿ ಶುಲ್ಕ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಭಾರತದ ಶಿಕ್ಷಣ ವ್ಯವಸ್ಥೆ ವಿಫಲವಾಗುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶದ ಶಿಕ್ಷಣ ವ್ಯವಸ್ಥೆ ಬದಲಿಸಲು ಪ್ರತಿಯೊಬ್ಬ ವಿದ್ಯಾರ್ಥಿಯ ಮಾತು ಕೇಳುವುದು ಮುಖ್ಯವಾಗಿದೆ.
ಈ ಬಗ್ಗೆ ಲಿಂಕ್ ವೊಂದನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಶಿಕ್ಷಣ ವ್ಯವಸ್ಥೆಯ ಕುರಿತು ತಮ್ಮ ಅನುಭವ ಹಾಗೂ ಆಲೋಚನೆ ಹಂಚಿಕೊಳ್ಳಬಹುದು ಎಂದಿದ್ದಾರೆ. ‘ಛಾತ್ರೋಂ ಕಿ ಗೂಂಜ್’ ಅನ್ನೋ ಕಾರ್ಯಕ್ರಮದ ಮೂಲಕ ದೇಶ್ಯಾದ್ಯಂತ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.


