LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇರಳಂ: ಭೀಕರ ಅಪಘಾತ, 8 ವಿದ್ಯಾರ್ಥಿಗಳ ಸಾವು

ಪ್ರಜಾಸ್ತ್ರ ಸುದ್ದಿ

ತ್ರಿಶೂರ್(Thrissur): ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 8 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳಂನ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಹತ್ತಿರದ ಪನಂಬಿಕ್ಕು ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 11.40ರ ಸಂದರ್ಭದಲ್ಲಿ ಇಂತಹದೊಂದು ದಾರುಣ ಘಟನೆ ನಡೆದಿದೆ.

ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಂಟೂ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರಿನತ್ತ ಕಾರು ಹೊರಟಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗುತ್ತಿದೆ. ತಮಿಳುನಾಡಿನ ನೋಂದಣಿ ಹೊಂದಿದ್ದು, ಪೊಲೀಸರ ತನಿಖೆ ನಡೆದಿದೆ. ಮೃತ ವಿದ್ಯಾರ್ಥಿಗಳ ಗುರುತು ಪತ್ತೆಯಾಗಬೇಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST