LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ‘ವಿಜಯ ರಥ’ ಬಸ್ ಗೆ ಸಚಿವ ಎಂ.ಬಿ ಪಾಟೀಲ ಚಾಲನೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದಲ್ಲಿ  ವಿನೂತನವಾಗಿ ಆಯೋಜಿಸಲಾದ  ಒಂದು ದಿನದ ಪ್ರೇಕ್ಷಣೀಯ ಸ್ಥಳಗಳ ಪ್ರವಾಸದ ವಿನೂತನ ವಿಜಯ ರಥಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಶುಕ್ರವಾರ ಚಾಲನೆ ನೀಡಿದರು.

ಶುಕ್ರವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಜಯ ರಥ ಬಸ್‌ಗೆ ಅವರು ಚಾಲನೆ ನೀಡಿದರು. ವಿಜಯ ರಥ ಬಸ್ ಪ್ರತಿದಿನ ಬೆಳಿಗ್ಗೆ ೯ ಗಂಟೆಗೆ ಕೇಂದ್ರ ಬಸ್ ನಿಲ್ದಾಣದಿಂದ  ಹೊರಟು, ನಗರದ ಇಬ್ರಾಹಿಂ ರೋಜಾ ಸ್ಮಾರಕ, ಶ್ರೀ ಲಕ್ಷ್ಮಿ ದೇವಸ್ಥಾನ ತೊರವಿ, 1008 ಸಹಸ್ರಫಣಿ ಶ್ರೀ ಪಾರ್ಶ್ವನಾಥ ಜೈನ ಬಸದಿ, ಮಲೀಕ-ಇ-ಮೈದಾನ ತೋಪ್, ಬಾರಾಕಮಾನ, ಗಗನ್ ಮಹಲ್, ಜಾಮೀಯಾ ಮಸೀದಿ, ಶಿವಗಿರಿ-ಶಿವನ ಮೂರ್ತಿ, ಗೋಳಗುಮ್ಮಟ, ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಮರಳಿ ಸಂಜೆ 4 ಗಂಟೆಗೆ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 11 ಗಂಟೆಗೆ ಚಹಾ-ಉಪಹಾರಕ್ಕಾಗಿ 15 ನಿಮಿಷ ಹಾಗೂ ಮಧ್ಯಾಹ್ನ 1.30 ಗಂಟೆಗೆ ವಿಶ್ರಾಂತಿಗೆ 30 ನಿಮಿಷ ಅವಕಾಶ ಕಲ್ಪಿಸಲಾಗಿದೆ.

ಈ ಒಂದು ದಿನದ ಪ್ರೇಕ್ಷಣಿಯ ಸ್ಥಳಗಳ ಪ್ರವಾಸದ ವಿಜಯ ರಥ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರವಾಸಿ ಮಾರ್ಗದರ್ಶಿಗಳ ಮೂಲಕ ಪ್ರವಾಸಿ ತಾಣಗಳ ಮಾಹಿತಿ, ಪ್ರವಾಸಿ ತಾಣಗಳಿಗೆ ತಡೆ ರಹಿತ ಭೇಟಿ, ಸುರಕ್ಷಿತ ಪ್ರಯಾಣದೊಂದಿಗೆ ಪ್ರವಾಸ, ನೀರಿನ ಬಾಟಲ್, ಚಹಾ, ಸ್ನಾö್ಯಕ್ಸ್ ಸೌಲಭ್ಯ,  ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಬಸ್ ಪ್ರಯಾಣಕ್ಕೆ ಮಾತ್ರ ಉಚಿತ ಅವಕಾಶ ಹಾಗೂ ಮುಂಚಿತವಾಗಿ ಕಾಯ್ದಿರಿಸುವ (ಬಸ್ ಟಿಕೆಟ್ ಬುಕ್ಕಿಂಗ್ : 7760914008, 08352-250359) ಸೌಲಭ್ಯ ಒದಗಿಸಲಾಗಿದೆ.  12 ವರ್ಷ ಒಳಗಿನ ಬಾಲಕಿಯರಿಗೆ 125 ರೂ, ಬಾಲಕರಿಗೆ 175 ರೂ, 12 ವರ್ಷ ಮೇಲ್ಪಟ್ಟ ಬಾಲಕಿಯರು ಹಾಗೂ ಮಹಿಳೆಯರಿಗೆ 160 ರೂ, ಬಾಲಕರು ಹಾಗೂ ಪುರುಷರಿಗೆ 330 ರೂ ಮತ್ತು ವಿದೇಶಿಯರಿಗೆ 900 ರೂ. ದರವನ್ನು ನಿಗದಿಪಡಿಸಲಾಗಿದೆ.

ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಕೆ.ಕೆ.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪ್ರವಾಸೋದ್ಯಮ ಇಲಾಖೆ ಪ್ರಭಾರಿ ಉಪನಿರ್ದೇಶಕ ಸಂತೋಷ ಭೋವಿ ಸೇರಿದಂತೆ ವಿವಿಧ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST