ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದಸರೆಯ ಮೊದಲ ದಿನವೇ ಘಜ್ನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮ್ಮದ್ ಸಂಸ್ಕೃತಿಯನ್ನು ನಾಡ ಹಬ್ಬ ದಸರೆಯ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ. ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿಯಾಗಿದೆ ಎಂದಿದ್ದಾರೆ.
https://twitter.com/BYVijayendra/status/1841707653170446779



