LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಾಠಿ ಚಾರ್ಜ್ ಖಂಡಿಸಿ ಗೋಲಗೇರಿಯಲ್ಲಿ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಬೆಳಗಾವಿಯಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಇದನ್ನು ಖಂಡಿಸಿ ತಾಲೂಕಿನ ಗೋಲಗೇರಿಯಲ್ಲಿ ಬುಧವಾರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಹೆದ್ದಾರಿ ಬಂದ್ ಮಾಡಿ, ಟಯರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ವೇಳೆ ಸಂತೋಷ ಪಾಟೀಲ ಮಾತನಾಡಿ, ಬಡ ಪಂಚಮಸಾಲಿ ಮಕ್ಕಳಿಗೆ ಮೀಸಲಾತಿ ಕೊಡುವ ಸಲುವಾಗಿ ಸುಮಾರು ಐದು ವರ್ಷದಿಂದ ಹೋರಾಟ ಮಾಡ್ತಿದ್ದೇವೆ. ನಿನ್ನೆ ರಾಜ್ಯ ಸರ್ಕಾರ ಲಾಠಿ ಚಾರ್ಜ್ ಮಾಡಿಸಿ ಅನ್ಯಾಯ ಮಾಡಿದೆ. ಮುಂದೆ ದೊಡ್ಡ ಹೋರಾಟ ಮಾಡುತ್ತೇವೆ. ಎಷ್ಟು ಜನರ ಮೇಲೆ ಲಾಠಿ ಚಾರ್ಜ್ ಮಾಡಿಸುತ್ತಾರೆ ನೋಡೋಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿದ್ದನಗೌಡ ಪಾಟೀಲ, ಗೌಡಣ್ಣ ಆಲಮೇಲ, ಪ್ರಭುಗೌಡ ಬಿರಾದಾರ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀಶೈಲ ಚಳ್ಳಗಿ, ಸುನೀಲಗೌಡ ಪಾಟೀಲ, ಕುಮಾರಗೌಡ ಪಾಟೀಲ, ಪ್ರಕಾಶ ಹೊಸಮನಿ, ಗೋಲ್ಲಾಳಗೌಡ ಬಿರಾದಾರ, ಮುದಕನಗೌಡ ಬಿರಾದಾರ, ಮಲಕನಗೌಡ ಪಾಟೀಲ, ಸಂತೋಷ ರದ್ದೇವಾಡಗಿ, ಸುಭಾಸಗೌಡ ಬಿರಾದರ, ಓಂಪ್ರಕಾಶ ಬಿರಾದಾರ, ಮಾಂತಗೌಡ ಬಿರಾದಾರ, ಬಸನಗೌಡ ಮೇಲಿನಮನಿ, ಗೋಲ್ಲಾಳ ಮೇಲಿನಮನಿ ಹಾಜರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST