ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಮಮಂದಿರ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ನಾಯಕರು ಕೊನೆಗೂ ಮೌನ ಮುರಿದಿದ್ದಾರೆ. ಈ ಬಗ್ಗೆ ಮಾತನಾಡಿರುವ ಆರ್ ಎಸ್ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಅಯೋಧ್ಯೆ ರಾಮಮಂದಿರದಲ್ಲಿ ನಡೆದ ಕಾಣಿಕೆ ಕಳ್ಳತನ ಸಮಾಜ ಹಾಗೂ ಭಕ್ತರ ನಂಬಿಕೆಗೆ ಧಕ್ಕೆಯಾಗಿದೆ ಎಂದಿದ್ದಾರೆ.
ಈ ಬಗ್ಗೆ ಶುಕ್ರವಾರ ಆರ್ ಎಸ್ಎಸ್ ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಘಟನೆ ತೀವ್ರ ನೋವು ಉಂಟು ಮಾಡಿದೆ. ಈ ಕುರಿತು ವಿಶೇಷ ತನಿಖಾ ತಂಡ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಮ ಜನ್ಮಭೂಮಿ ಟ್ರಸ್ಟ್ ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯನ್ನು ತರುವ ಮೂಲಕ ಹಿಂದೂ ಸಮಾಜದ ನಂಬಿಕೆಯನ್ನು ಬಲಪಡಿಸುವುದನ್ನು ಮುಂದುವರೆಸುತ್ತದೆ ಅನ್ನೋ ನಂಬಿಕೆಯಿದೆ ಎಂದಿದ್ದಾರೆ.



