ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವ ಐದು ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ 31ರೊಳಗೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿದೆ. ಸಪ್ಟೆಂಬರ್ ಅಂತ್ಯದ ತನಕ ಕಾಲಾವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿದ್ದವು.
ರಾಜ್ಯದಲ್ಲಿ ಜನಗಣತಿ, ಎಸ್ಐಆರ್, ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯ ಸಿಬ್ಬಂದಿ ನಿರತರಾಗಿದ್ದಾರೆ. ಜೂನ್ 30ರಿಂದ ಅನ್ವಯವಾಗುವಂತೆ ಮೂರು ತಿಂಗಳು ಅವಕಾಶ ನೀಡಬೇಕು ಎಂದು ಎರಡು ಪ್ರತ್ಯೇಕ ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ, ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣೆ ಮುಗಿಸಲು ಹೇಳಿದೆ. ಬೆಂಗಳೂರು ದಕ್ಷಿಣ, ಉತ್ತರ, ಕೇಂದ್ರ, ಪೂರ್ವ ಹಾಗೂ ಪಶ್ಚಿಮ ಪಾಲಿಕೆಗಳ ಚುನಾವಣೆ ನಡೆಸಬೇಕಿದೆ.



