ಪ್ರಜಾಸ್ತ್ರ ಸುದ್ದಿ
ವಿಜಯನಗರ(Vijayanagara): ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಂಡು ಸ್ಥಳದಲ್ಲಿಯೇ ಪರಿಹರಿಸುವ ಸಂಬಂಧ ಪ್ರಜಾಸೇವೆ ಅನ್ನೋ ಹೊಸ ಇಲಾಖೆ ಶುರು ಮಾಡಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಕೂಡ್ಲಗಿಯಲ್ಲಿ ಚಾಲನೆ ನೀಡಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದರು.
ಪ್ರಜಾಸೇವೆ ಇಲಾಖೆಗೆ ಚಾಲನೆ ನೀಡುವುದಕ್ಕೂ ಮೊದಲು ಕೂಡ್ಲಗಿಯಲ್ಲಿರುವ ಮಹಾತ್ಮ ಗಾಂಧಿಯವರ ಚಿತಾಭಸ್ಮ ಸ್ಮಾರಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಉಪಸ್ಥಿತರಿದ್ದರು.



