ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರವು ನೀಡಬೇಕಾದ ಪೊಲೀಸರೆ ಸಂತ್ರಸ್ತೆಯ ತಾಯಿಯಿಂದ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯ ಎಎಸ್ಐ ಶರಣಬಸಪ್ಪ ಹಾಗೂ ಮಹಿಳಾ ಪೇದೆ ಜ್ಯೋತಿ ಎಂಬುವರನ್ನು ಭಾನುವಾರ ಬಂಧಿಸಲಾಗಿದೆ.
ಸರ್ಕಾರಿ ವಕೀಲರಿಗೆ 1 ಸಾವಿರ ರೂಪಾಯಿ ಕೊಡಬೇಕು ಎಂದು ಪಡೆದುಕೊಂಡಿದ್ದರು. ಕಾನೂನು ನೆರವು ನೀಡಲು ತನಗೆ ಹಾಗೂ ಎಎಸ್ಐಗೆ ತಲಾ 5 ಸಾವಿರ ರೂಪಾಯಿ ಕೊಡಬೇಕು ಎಂದು ಮಹಿಳಾ ಪೇದೆ ಜ್ಯೋತಿ ಮಹಿಳೆಗೆ ಹೇಳಿದ್ದರು. ಇದರಿಂದ ಬೇಸತ್ತ ಮಹಿಳೆ ಲೋಕಾಯುಕ್ತರಿಗೆ ದೂರು ನೀಡಿದ್ದರು. 10 ಸಾವಿರ ರೂಪಾಯಿ ಪಡೆಯುವಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.



